
ದಿನ ಉರುಳಿ ಯುಗವಾಗಿ
ಮನವೆರಡು ಒಂದಾಗಿ
ಪಿಸುಮಾತು ನುಡಿಯಾಗಿ
ಕನಸೊಂದು ನನಸಾಗಿದೆ..
ಚೈತ್ರವು ಚಿಗುರಾಗಿದೆ
ಮಾಮರವು ಕೊನರಿದೆ
ಭೂಮಿ ಕಾದು ನಿಂತಿದೆ
ಆಗಸದ ಮಿಲನಕೆ...
ಕಡಲು ಭೋರ್ಗರೆಯುತಿದೆ
ತೀರದ ಸೆಳೆತವಿದೆ
ನದಿಯು ಓಡೋಡಿ ಸಾಗುತಿದೆ
ಭಾವ ಜೀವ ತಳೆಯಲು - ಕಡಲ ತೀರದಲಿ!!!
---------------------------------------------------
ಸ್ನೇಹಿತರೆ,
ಹೊಸ ಬದುಕಿನ ಹೊಸ ಆರಂಭಕೆ
ಮುನ್ನುಡಿ ಬರೆಯುತಿಹೆವು,
ಅಲ್ಲೊಂದು ಖುಷಿಯಿದೆ, ವಚನವಿದೆ
ಸಡಗರವಿದೆ, ಸಂತಸವಿದೆ, ಊಟವಿದೆ :)
ಸತಿ ಪತಿಗಳಾಗುತಿಹೆವು,
ಜೂನ್ ೫, ೨೦೧೧ - ಆದಿತ್ಯವಾರದಂದು
೧೨.೨೮ರ ಅಭಿಜಿನ್ ಲಗ್ನದ ಸುಮುಹೂರ್ತದಲ್ಲಿ
ಉಡುಪಿಯ ಶಾರದಾ ಕಲ್ಯಾಣ ಮಂಟಪದಲ್ಲಿ
ನೀವು ಬರಬೇಕು, ನಮ್ಮೊಂದಿಗಿರಬೇಕು, ನಮ್ಮನ್ನು ಹರಸಬೇಕು
ನಮ್ಮ ಆತಿಥ್ಯವನ್ನು ಸ್ವೀಕರಿಸಬೇಕು..
ನಿಮ್ಮ ಆಗಮನದ ನಿರೀಕ್ಷೆಯಲ್ಲಿ...
ಸಂದೀಪ್ ಮತ್ತು ದಿವ್ಯಾ